Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:30 - ಕನ್ನಡ ಸತ್ಯವೇದವು J.V. (BSI)

30 ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:30
28 ತಿಳಿವುಗಳ ಹೋಲಿಕೆ  

ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಅವಳು - ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡಿದ್ದೇನಲ್ಲಾ ಅಂದುಕೊಂಡು ತನ್ನ ಸಂಗಡ ಮಾತಾಡಿದ್ದ ಯೆಹೋವನಿಗೆ [ಎಲ್ಲವನ್ನೂ] ನೋಡುವ ದೇವರೆಂದು ಹೆಸರಿಟ್ಟಳು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.


ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;


ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಹತಿಸಿದನು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.


ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಬಳಿಕೆಯಾಗಿದ್ದನು.


ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಅಲ್ಲಿರುವ ಊರಿಗೆ ಮೊದಲು ಲೂಜ್ ಎಂದು ಹೆಸರಿತ್ತು.


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು


ಯಾಕೋಬನು ಪದ್ದನ್ಅರಾವಿುನಿಂದ ಬಂದಾಗ ದೇವರು ತಿರಿಗಿ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.


ಆದದರಿಂದ ಅವನು ಆ ದೂತನನ್ನು - ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು ಎಂದು ಕೇಳಿದನು.


ಯೆಹೋವನ ದೂತನು - ನನ್ನ ಹೆಸರನ್ನು ಕೇಳುವದೇಕೆ? ಅದು ಆಶ್ಚರ್ಯಕರವಾದದ್ದು ಅಂದನು.


[ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು