Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:10 - ಕನ್ನಡ ಸತ್ಯವೇದವು J.V. (BSI)

10 ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:10
19 ತಿಳಿವುಗಳ ಹೋಲಿಕೆ  

ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ ಆತನ ದರ್ಶನ ಮಾಡಿ ಉತ್ಸಾಹಧ್ವನಿಗೈದು ತಿರಿಗಿ ಆತನಿಂದ ನೀತಿವಂತನೆನಿಸಿಕೊಳ್ಳುವನು.


ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.


ಇದು ಯೆಹೋವನ ನುಡಿ - ಹತಶೇಷವಾದ ಜನಕ್ಕೆ ಅರಣ್ಯದಲ್ಲಿ ದಯೆದೊರೆಯುವದು; ಇಸ್ರಾಯೇಲು ವಿಶ್ರಾಂತಿಯನ್ನು ಹುಡುಕುವದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು ಹೀಗನ್ನುವನು -


ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.


ಅಬ್ಷಾಲೋಮನು ಅವನಿಗೆ - ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದರೆ ಒಳ್ಳೇದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು; ನಾನು ಹೇಗೂ ಅರಸನ ಮೋರೆಯನ್ನು ನೋಡಬೇಕು;


ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರುಷ ಯೆರೂಸಲೇವಿುನಲ್ಲಿ ವಾಸವಾಗಿದ್ದ ನಂತರ


ಆದರೆ ಅರಸನು - ಅಬ್ಷಾಲೋಮನು ತನ್ನ ಮನೆಗೆ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು; ಅರಸನ ಮುಖವನ್ನು ನೋಡಲಿಲ್ಲ.


ಅದಕ್ಕೆ ದಾವೀದನು - ಒಳ್ಳೇದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಮಾಡಬೇಕು. ನನ್ನನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರಕೊಂಡು ಬರಬೇಕು; ಹಾಗೆ ಕರಕೊಂಡು ಬಾರದಿದ್ದರೆ ನೀನು ನನ್ನ ಮೋರೆಯನ್ನು ನೋಡಕೂಡದು ಎಂದು ಉತ್ತರ ಕೊಟ್ಟನು.


ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ರೂತಳು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ - ಪರದೇಶಿಯಾದ ನನ್ನಲ್ಲಿ ಇಷ್ಟು ಕಟಾಕ್ಷವೇಕೆ ಅನ್ನಲು


ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು.


ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ.


ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.


ಏಸಾವನು - ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ ಅನ್ನಲು


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು