Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:14 - ಕನ್ನಡ ಸತ್ಯವೇದವು J.V. (BSI)

14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೊರಡಬಹುದು. ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:14
13 ತಿಳಿವುಗಳ ಹೋಲಿಕೆ  

ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಬಳಿಕ ಯಾಕೋಬನು ಎದೋಮ್ಯರ ದೇಶವಾಗಿರುವ ಸೇಯೀರ್‍ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ಮುಂದೆ ಕಳುಹಿಸಿದನು.


ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಆತನು ಈ ತರದ ಅನೇಕ ಸಾಮ್ಯಗಳಿಂದ ಜನರ ಗ್ರಹಿಕೆಗೆ ತಕ್ಕ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಸಾಮ್ಯವಿಲ್ಲದೆ ಅವರಿಗೆ ಹೇಳಲಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ


ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ.


ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶದಿಂದ ಹನಿ ಬಿದ್ದಿತು; ಮೇಘಮಂಡಲವು ಮಳೆಗರೆಯಿತು.


ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.


ನಿಮಗೆ ಹಾಲು ಕುಡಿಸಿದೆನು, ಅನ್ನಾ ಕೊಡಲಿಲ್ಲ; ಅನ್ನಾ ತಿನ್ನುವದಕ್ಕೆ ನಿಮಗೆ ಇನ್ನೂ ಶಕ್ತಿ ಇರಲಿಲ್ಲ, ಈಗಲಾದರೂ ಶಕ್ತಿಯಿಲ್ಲ;


ಅದಕ್ಕೆ ಯಾಕೋಬನು - ನನ್ನ ಮಕ್ಕಳು ಎಳೇ ಪ್ರಾಯದವರು; ಅದಲ್ಲದೆ ಈದಿರುವ ದನಕುರಿಗಳು ನನ್ನ ಬಳಿಯಲ್ಲಿರುವದು ಪ್ರಭುವಿಗೆ ತಿಳಿದಿದೆ; ಒಂದೇ ದಿನ ಹೆಚ್ಚಾಗಿ ದಾರಿ ನಡಿಸಿದರೆ ಆಡುಕುರಿಗಳೆಲ್ಲವೂ ಸತ್ತು ಹೋದಾವು.


ಕಳುಹಿಸುವಾಗ ಅವರಿಗೆ - ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ - ನಿನ್ನ ಸೇವಕನಾದ ಯಾಕೋಬನು ಇಷ್ಟು ದಿವಸ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು