Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:2 - ಕನ್ನಡ ಸತ್ಯವೇದವು J.V. (BSI)

2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:2
58 ತಿಳಿವುಗಳ ಹೋಲಿಕೆ  

ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು ಅವರನ್ನು ಪರಿಶುದ್ಧಗೊಳಿಸಿದನು; ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆಗ ಯೆಹೋಶುವನು ಅವರಿಗೆ - ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದು ಹಾಕಿ ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ ಅಂದನು.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.


ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.


ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ದ್ರಾಕ್ಷಾರಸವನ್ನು ಕುಡಿದು ಬಂಗಾರಬೆಳ್ಳಿ ತಾಮ್ರಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.


ಮನುಷ್ಯಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.)


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?


ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ ನನ್ನನ್ನು ಶುದ್ಧಗೊಳಿಸು.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.


ಎಲೀಷನು ಅವನಿಗೆ - ಹೋಗಿ ಯೊರ್ದನ್ ಹೊಳೆಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹವು ಮುಂಚಿನಂತಾಗುವದು; ನೀನು ಶುದ್ಧನಾಗುವಿ ಎಂದು ಹೇಳಿಕಳುಹಿಸಿದನು.


ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವದಿರುತ್ತದೆ? ನೀನೇ ಹೋಗಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡು ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ಐಗುಪ್ತ್ಯರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ ರಕ್ಷಿಸಿ ಅದರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.


ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು.


ಈ ಆಜ್ಞೆಗಳಿಗೆ ವಿಧೇಯರಾಗದೆ ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಸುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ; ಆಮೇಲೆ ನೀವು ಪಾಳೆಯದೊಳಗೆ ಬರಬಹುದು ಎಂದು ಹೇಳಿದನು.


ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆಯೂ ಸ್ನಾನಮಾಡದೆಯೂ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು