Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:5 - ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:5
16 ತಿಳಿವುಗಳ ಹೋಲಿಕೆ  

ನೀವು ಹೋಗುವ ಎಲ್ಲಾ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ ಕಳವಳವನ್ನು ಉಂಟು ಮಾಡಿ ನಿಮ್ಮನ್ನು ವಿರೋಧಿಸುವವರನ್ನು ಓಡಿಹೋಗುವಂತೆ ಮಾಡುವೆನು.


ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರಿಗೆ ಯೆಹೋವನ ಭಯವಿದ್ದದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಫಕ್ಕನೆ ಅವರು ಭಯಭ್ರಾಂತರಾಗುವರು; ಯಾಕಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.


ನಾನು ನಿಮ್ಮ ಎದುರಿನಿಂದ ಅನ್ಯಜನಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ಅಷ್ಟೇ ಅಲ್ಲದೆ ನೀವು ವರುಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂವಿುಯನ್ನು ಅಪಹರಿಸುವದಕ್ಕೆ ಅಪೇಕ್ಷಿಸುವದಿಲ್ಲ.


ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು.


ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿ - ಯಾರು ಸೌಲ ಸಮುವೇಲರನ್ನು ಹಿಂಬಾಲಿಸುವದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು ಎಂದು ಹೇಳಿಸಿದನು. ಯೆಹೋವನ ಭಯಪ್ರೇರಿತರಾಗಿ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿ ಬಂದರು.


ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು


ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಾಕೋಬನಿಗೆ ಒಪ್ಪಿಸಲು ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.


ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಇಂದಿನಿಂದ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು ಎಂದು ಹೇಳಿದನು.


ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ -


ಕೂಷ್ಯರು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ಚೂರು ಚೂರಾದರು. ಇಸ್ರಾಯೇಲ್ಯರಿಗೆ ಅಪರಿವಿುತವಾದ ಕೊಳ್ಳೆ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು