Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:14 - ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:14
22 ತಿಳಿವುಗಳ ಹೋಲಿಕೆ  

ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೊನೆಂಬ ಕಿರ್ಯತರ್ಬಕ್ಕೆ ಸೇರಿರುವದು; ಅದೇ ಅಬ್ರಹಾಮ್ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ ಕುಟುಂಬ ಸಂತಾನಗಳಿಗೂ ಯೆಹೋವನಿಂದ ನಿತ್ಯ ಸೌಭಾಗ್ಯವು ದೊರಕಲಿ ಅಂದನು.


ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಲು ಅವನು - ನನ್ನ ಒಡೆಯನಾದ ಅರಸನ ಶತ್ರುಗಳಿಗೂ ಅವನಿಗೆ ಕೇಡು ಮಾಡುವದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ ಎಂದು ಉತ್ತರಕೊಟ್ಟನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು.


ಅವನಿಗೆ ಕ್ಷೇಮವೋ ಎಂದು ಕೇಳಲು ಅವರು - ಕ್ಷೇಮ; ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.


ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.


ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು.


ಅವನು ಶೆಕೆವಿುಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು -


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲ್‍ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಹೊಂದಿಕೊಂಡದರಿಂದ ಹೆಬ್ರೋನ್ ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.


ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.


ಊರೀಯನು ಬಂದಾಗ ದಾವೀದನು - ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದದೆ ಎಂದು ವಿಚಾರಿಸಿದನಂತರ ಅವನಿಗೆ -


ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿ - ನೀವು ಹೇಳಿದ ಮುದುಕನಾಗಿರುವ ನಿಮ್ಮ ತಂದೆಗೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ ಎಂದು ಕೇಳಲು ಅವರು ಬೊಗ್ಗಿ ನಮಸ್ಕಾರಮಾಡಿ -


ದಾವೀದನು ತಾನು ತಂದವುಗಳನ್ನು ಸಾಮಾನುಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ


ಅವನು ಆಕೆಯ ಈಗಿನ ಸ್ಥಿತಿಯನ್ನೂ ಮುಂದಿನ ಗತಿಯನ್ನೂ ವಿಚಾರಿಸುವದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು