Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:33 - ಕನ್ನಡ ಸತ್ಯವೇದವು J.V. (BSI)

33 ಅವನು ಅದರ ಗುರುತನ್ನು ಹಿಡಿದು - ಈ ಅಂಗಿ ನನ್ನ ಮಗನದೇ ಹೌದು; ದುಷ್ಟಮೃಗವು ಅವನನ್ನು ಕೊಂದು ತಿಂದಿರಬೇಕು; ಯೋಸೇಫನು ಸಂದೇಹವಿಲ್ಲದೆ ಸೀಳಿ ಹಾಕಲ್ಪಟ್ಟಿರಬೇಕು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯಕೋಬನು ಅದರ ಗುರುತನ್ನು ಹಿಡಿದು, ” ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:33
10 ತಿಳಿವುಗಳ ಹೋಲಿಕೆ  

ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟುಹೋದನು; ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿಹಾಕಲ್ಪಟ್ಟಿರಬೇಕೆಂದು ತಿಳುಕೊಂಡೆನು; ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.


ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ ದುಷ್ಟಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ ಬನ್ನಿ; ಆಗ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಮಾತಾಡಿಕೊಂಡರು.


ಅದಕ್ಕೆ ಯೇಸು - ನಾನು ಮಾಡುವದು ಈಗ ನಿನಗೆ ತಿಳಿಯುವದಿಲ್ಲ, ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.


ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ದೇವರ ಮನುಷ್ಯನು ಸ್ವಲ್ಪ ದೂರ ಹೋದನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ಆ ನಿಲುವಂಗಿಯನ್ನು ತಮ್ಮ ತಂದೆಗೆ ಕಳುಹಿಸಿದರು; ತಂದವರು - ಇದು ನಮಗೆ ಸಿಕ್ಕಿತು; ಇದು ನಿನ್ನ ಮಗನ ಅಂಗಿ ಹೌದೋ ಅಲ್ಲವೋ ನೋಡು ಎಂದು ಅವನಿಗೆ ಹೇಳಲು


ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.


ತಂದೆಯಿದ್ದಾನೆ, ಅವನು ಮುದುಕನು; ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಹುಡುಗನೂ ಇದ್ದಾನೆ. ಅವನ ಒಡಹುಟ್ಟಿದವನು ಸತ್ತು ಹೋದನು; ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ, ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು ಎಂದು ಹೇಳಿದೆವು.


ಆಗ ಇಸ್ರಾಯೇಲನು ಯೋಸೇಫನಿಗೆ - ನಿನ್ನ ಮುಖವನ್ನು ತಿರಿಗಿ ನೋಡುವೆನೆಂದು ನಾನು ನೆನಸಿರಲಿಲ್ಲ; ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನಲ್ಲಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು