Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:35 - ಕನ್ನಡ ಸತ್ಯವೇದವು J.V. (BSI)

35 ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:35
18 ತಿಳಿವುಗಳ ಹೋಲಿಕೆ  

ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಅವನ ಮನೆಯ ಹಿರೀಸೇವಕರು ಅವನನ್ನು ಎಬ್ಬಿಸುವದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.


ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.


ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು.


ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.


ನಾವು ಅವನಿಗೆ - ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ;


ಅದಕ್ಕೆ ಲಾಬಾನನು ಯಾಕೋಬನಿಗೆ - ಈ ಹೆಂಗಸರು ನನ್ನ ಕುಮಾರ್ತೆಗಳಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣಮುಂದೆ ಇರುವದೆಲ್ಲವೂ ನನ್ನದಲ್ಲವೇ. ಆದರೆ ಈ ನನ್ನ ಕುಮಾರ್ತೆಗಳಿಗೋಸ್ಕರವೂ ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡುವೆನು?


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಅವನ ಮಕ್ಕಳಾದ ಏಸಾವ ಯಾಕೋಬರು ಅವನಿಗೆ ಸಮಾಧಿಮಾಡಿದರು.


ಈಗ ಸತ್ತಿದ್ದಾನಲ್ಲಾ, ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವದು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವದಿಲ್ಲ ಎಂದು ಉತ್ತರ ಕೊಟ್ಟನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಆಗ ಇಸ್ರಾಯೇಲನು ಯೋಸೇಫನಿಗೆ - ನಿನ್ನ ಮುಖವನ್ನು ತಿರಿಗಿ ನೋಡುವೆನೆಂದು ನಾನು ನೆನಸಿರಲಿಲ್ಲ; ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನಲ್ಲಾ ಅಂದನು.


ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.


ಆದದರಿಂದ ಇವರ ತಂದೆಯಾದ ಎಫ್ರಾಯೀಮನು ಬಹು ದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವದಕ್ಕೋಸ್ಕರ ಬಂದರು.


ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು