Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:36 - ಕನ್ನಡ ಸತ್ಯವೇದವು J.V. (BSI)

36 ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:36
12 ತಿಳಿವುಗಳ ಹೋಲಿಕೆ  

ಅದು ಯೋಸೇಫನು ಬಿದ್ದಿದ್ದ ಸೆರೆಮನೆಯೇ. ದಳವಾಯಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇವಿುಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು.


(ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.


ಯೆಹೋವನನ್ನು ಅವಲಂಬಿಸಿದ ವಿದೇಶೀಯನು - ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು ಎಂದು ಮಾತಾಡದಿರಲಿ; ಮತ್ತು ನಪುಂಸಕನು - ಅಯ್ಯೋ, ನಾನು ಗೊಡ್ಡುಮರ ಎಂದು ಅಂದುಕೊಳ್ಳದಿರಲಿ.


ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು


ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ


ಅವರನ್ನು ಮೈಗಾವಲಿನವರ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದನು.


ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು; ಅವನು ದಳವಾಯಿಯ ದಾಸನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ಹೇಳಿದನು; ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.


ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು