Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:9 - ಕನ್ನಡ ಸತ್ಯವೇದವು J.V. (BSI)

9 ಅವನು ಇನ್ನೊಂದು ಕನಸು ಕಂಡು ಅದನ್ನೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ - ಇನ್ನೊಂದು ಕನಸು ಕಂಡಿದ್ದೇನೆ; ಅದರಲ್ಲಿ ಸೂರ್ಯಚಂದ್ರರೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜೋಸೆಫನಿಗೆ ಇನ್ನೊಂದು ಕನಸು ಬಿತ್ತು. ಅದನ್ನೂ ಅವನು ಅಣ್ಣಂದಿರಿಗೆ ತಿಳಿಸಿದ: “ನಾನು ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯ, ಚಂದ್ರ, ಹಾಗೂ ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:9
19 ತಿಳಿವುಗಳ ಹೋಲಿಕೆ  

ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ನನ್ನ ಸಿವುಡು ಎದ್ದು ನಿಲ್ಲಲು ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು ಎಂದು ಹೇಳಿದನು.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಅದು ನಕ್ಷತ್ರಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.


ಅವರು ಗೋಷೆನ್‍ಸೀಮೆಗೆ ಬಂದಾಗ ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವದಕ್ಕೋಸ್ಕರ ಗೋಷೆನಿಗೆ ಹೋಗಿ ಅವನಿಗೆ ಕಾಣಿಸಿಕೊಂಡು ತಂದೆಯನ್ನು ಬಹಳ ಹೊತ್ತಿನವರೆಗೆ ಅಪ್ಪಿಕೊಂಡು ಅತ್ತನು.


ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ನಿನ್ನ ಮಗನಾದ ಯೋಸೇಫನು ಹೀಗನ್ನುತ್ತಾನೆ - ದೇವರು ನನ್ನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇವಿುಸಿದ್ದಾನೆ; ನೀನು ತಡಮಾಡದೆ ನನ್ನ ಬಳಿಗೆ ಬಾ;


ಸ್ವಾವಿುಯು ಸೇವಕರನ್ನು - ನಿಮಗೆ ತಂದೆಯಾಗಲಿ ತಮ್ಮನಾಗಲಿ ಇದ್ದಾನೋ ಎಂದು ಕೇಳಲು ನಾವು -


ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನೂ ಅಲ್ಲೇ ಇದ್ದನು.


ನಿನ್ನ ಸೇವಕನಾದ ನಮ್ಮ ತಂದೆಗೆ ಕ್ಷೇಮ; ಅವನು ಇನ್ನೂ ಇದ್ದಾನೆ ಅಂದರು.


ಫರೋಹನಿಗೆ ಕನಸು ಎರಡು ವಿಧವಾಗಿ ಬಿದ್ದದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನೆಂಬದಾಗಿ ತಿಳುಕೊಳ್ಳಬೇಕು.


ಯೋಸೇಫನು ಫರೋಹನಿಗೆ - ತಾವು ಕಂಡ ಎರಡು ಕನಸುಗಳೂ ಒಂದೇ ವಿಷಯವಾದವುಗಳು. ದೇವರು ತಾನು ಮಾಡಬೇಕೆಂದಿರುವದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.


ಅವನು ಈ ಕನಸನ್ನು ತನ್ನ ತಂದೆಗೂ ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ - ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬಂದೇವೋ ಎಂದು ಹೇಳಿ ಗದರಿಸಿದನು.


ಅದಕ್ಕೆ ಅವನ ಅಣ್ಣಂದಿರು - ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನಮಾಡುವಿಯಾ ಎಂದು ಅವನಿಗೆ ಹೇಳಿ ಅವನ ಕನಸುಗಳಿಗಾಗಿಯೂ ಮಾತುಗಳಿಗಾಗಿಯೂ ಮತ್ತಷ್ಟು ಹಗೆಮಾಡಿದರು.


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಯೋಸೇಫನು ಮನೆಗೆ ಬಂದಾಗ ಅವರು ಕಾಣಿಕೆಯನ್ನು ಮನೆಯೊಳಕ್ಕೆ ತಂದುಕೊಟ್ಟು ಅವನ ಮುಂದೆ ಅಡ್ಡಬಿದ್ದರು.


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು