Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:23 - ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:23
8 ತಿಳಿವುಗಳ ಹೋಲಿಕೆ  

(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಅವನಿಗೆ ಗಾಯವೂ ಅವಮಾನವೂ ಆಗುವವು. ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ಅವನು ಯೆಹೂದನ ಬಳಿಗೆ ಹಿಂದಿರುಗಿಬಂದು - ನಾನು ಅವಳನ್ನು ಕಾಣಲಿಲ್ಲ. ಮತ್ತು ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ದೇವದಾಸಿಯೂ ಇಲ್ಲವೆಂದರು ಎಂದು ತಿಳಿಸಿದನು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು