Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:24 - ಕನ್ನಡ ಸತ್ಯವೇದವು J.V. (BSI)

24 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:24
32 ತಿಳಿವುಗಳ ಹೋಲಿಕೆ  

ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.


ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.


ಸೂಳೆಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಒಹೊಲೀಬಳನ್ನೂ ಸೇರಿದರು.


ಆದರೂ ಇವಳು ತಾನು ಐಗುಪ್ತದೇಶದಲ್ಲಿ ಸೂಳೆಯಾಗಿದ್ದ ತನ್ನ ಎಳೆಪ್ರಾಯವನ್ನು ಜ್ಞಾಪಕಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿ


ಒಹೊಲಳು ನನ್ನ ಹೆಂಡತಿಯಾಗಿದ್ದರೂ ಸೂಳೆಯಾಗಿ ನಡೆದು ತನ್ನ ವಿುಂಡರನ್ನು ಅಂದರೆ


ಈಕೆಯು ಇವನನ್ನು ಬಿಟ್ಟು ಜಾರತ್ವಮಾಡಿ ಯೆಹೂದದ ಬೇತ್ಲೆಹೇವಿುನಲ್ಲಿದ್ದ ತನ್ನ ತೌರಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.


ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ನಿನ್ನ ಮಟ್ಟಿಗೇ ಇರಲಿ. ತಾನು ಒಪ್ಪಿದ ಕೆಲಸದ ವಿಷಯದಲ್ಲಿ ಇದು ಸರಿಯೋ ಸರಿಯಲ್ಲವೋ ಎಂದು ಸಂಶಯ ಪಡದವನೇ ಧನ್ಯನು.


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ನನಗಾಗಿ ಬಹು ದಿವಸ ತಾಳಿಕೊಂಡಿರು; ಸೂಳೆತನಮಾಡಬೇಡ, ಯಾವನನ್ನೂ ಸೇರಬೇಡ; ನಾನು ಸಹ ನಿನ್ನವನೇ ಎಂದು ಹಾಗೆ ಇರುವೆನು ಎಂದು ಹೇಳಿದೆನು.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.


ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ.


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.


ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ - ಯೆಹೋವನಾಣೆ, ಆ ಮನುಷ್ಯನು ಸಾಯಲೇ ಬೇಕು.


ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಅವರು - ನಮ್ಮ ತಂಗಿಯನ್ನು ಸೂಳೆಯಂತೆ ನಡಿಸಬಹುದೋ ಎಂದು ಹೇಳಿದರು.


ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ -


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು.


ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ ಹಾದುಹೋಗುವವರೆಲ್ಲರನ್ನು ಸೇರಿ ಸೂಳೆತನವನ್ನು ಹೆಚ್ಚಾಗಿ ನಡಿಸಿದ್ದೀ.


ನಿನ್ನ ನೆರೆಯವರೂ ಅತಿಕಾವಿುಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ರೇಗಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು