Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:26 - ಕನ್ನಡ ಸತ್ಯವೇದವು J.V. (BSI)

26 ಯೆಹೂದನು ಅವುಗಳ ಗುರುತನ್ನು ತಿಳಿದು - ನಾನು ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆಮಾಡಿಸಲಿಲ್ಲವಾದ್ದರಿಂದ ಆಕೆ ನನಗಿಂತಲೂ ನ್ಯಾಯವಾಗಿ ನಡೆದಳು ಎಂದು ಹೇಳಿದನು. ಅವನು ತಿರಿಗಿ ಆಕೆಯ ಸಹವಾಸ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:26
19 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ದಾವೀದನಿಗೆ - ನೀನು ನನಗಿಂತ ನೀತಿವಂತನು; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೇದನ್ನೇ ಮಾಡಿದಿ.


ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿದ್ದೀಯಷ್ಟೆ.


ಒಂದು ಸಾರಿ ಮಾತಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲೊಲ್ಲೆನು ಎಂದು ಯೆಹೋವನಿಗೆ ಹೇಳಿದನು.


ಈಗಲಾದರೋ ನಿನಗೇ [ಶ್ರಮೆ] ಬಂತು. ಅದರಿಂದ ನೀನು ಬೇಸರಗೊಂಡಿರುವಿ, ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.


ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.


ಅರಸನಾದ ದಾವೀದನು ಯೆರೂಸಲೇವಿುಗೆ ಬಂದ ಮೇಲೆ ತಾನು ಮನೆಕಾಯುವದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರಕೊಡುತ್ತಿದ್ದನು; ಆದರೆ ಅವರನ್ನು ತಿರಿಗಿ ಕೂಡಲಿಲ್ಲ. ಅವರು ಜೀವದಿಂದಿರುವವರೆಗೂ ವಿಧವೆಯರಂತಿದ್ದು ಕಾವಲಲ್ಲಿರಬೇಕಾಯಿತು.


ಆಗ ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.


ಆಗ ಆಕೆ - ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾವಸ್ತ್ರಗಳನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು [ವೇಶ್ಯಾಸ್ತ್ರೀಯಂತೆ] ಅಲಂಕೃತಳಾಗಿ ತಿಮ್ನಾವೂರಿನ ದಾರಿಯಲ್ಲಿರುವ ಏನಯಿಮೂರಿನ ಬಾಗಿಲ ಬಳಿಯಲ್ಲಿ ಕೂತುಕೊಂಡಳು.


ಅವನು ಅದರ ಗುರುತನ್ನು ಹಿಡಿದು - ಈ ಅಂಗಿ ನನ್ನ ಮಗನದೇ ಹೌದು; ದುಷ್ಟಮೃಗವು ಅವನನ್ನು ಕೊಂದು ತಿಂದಿರಬೇಕು; ಯೋಸೇಫನು ಸಂದೇಹವಿಲ್ಲದೆ ಸೀಳಿ ಹಾಕಲ್ಪಟ್ಟಿರಬೇಕು ಎಂದು ಹೇಳಿ


ಆ ಪುರುಷನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು - ಯೆಹೋವನ ಅನುಗ್ರಹದಿಂದ ಗಂಡುಮಗುವನ್ನು ಪಡೆದಿದ್ದೇನೆ ಎಂದು ಹೇಳಿದಳು.


ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ; ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬದು ಈ ಹೊತ್ತು ಪ್ರಕಟವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು