Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:7 - ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:7
11 ತಿಳಿವುಗಳ ಹೋಲಿಕೆ  

ಯೆಹೂದನಿಗೆ ಶೂನನ ಮಗಳಾದ ಕಾನಾನ್ ಸ್ತ್ರೀಯಲ್ಲಿ ಏರ್, ಓನಾನ್, ಶೇಲಾಹ ಎಂಬ ಮೂರು ಮಂದಿ ಮಕ್ಕಳು ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದದರಿಂದ ಯೆಹೋವನು ಅವನನ್ನು ಸಾಯಿಸಿದನು.


ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ಯೆಹೂದನ ಮಕ್ಕಳಲ್ಲಿ ಏರ್ ಓನಾನರು ಕಾನಾನ್ ದೇಶದಲ್ಲೇ ಸತ್ತರಷ್ಟೆ.


ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು.


ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಆದರೆ ನೋಹನಿಗೆ ಯೆಹೋವನ ದಯವು ದೊರಕಿತು.


ಯೆಹೂದನು ತನ್ನ ಚೊಚ್ಚಲಮಗನಾದ ಏರನಿಗೆ ತಾಮಾರೆಂಬ ಹೆಣ್ಣನ್ನು ಮದುವೆ ಮಾಡಿದನು.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇನು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು