Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:14 - ಕನ್ನಡ ಸತ್ಯವೇದವು J.V. (BSI)

14 ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನೋಡಿ, ನನ್ನ ಯಜಮಾನರು ಮಾಡಿರುವ ಕೆಲಸ, ಒಬ್ಬ ಹಿಬ್ರಿಯನನ್ನು ಮನೆಗೆ ಸೇರಿಸಿಕೊಂಡು ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ಅತ್ಯಾಚಾರಕ್ಕಾಗಿ ನನ್ನ ಹತ್ತಿರಕ್ಕೆ ಬಂದ; ನಾನು ಗಟ್ಟಿಯಾಗಿ ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:14
21 ತಿಳಿವುಗಳ ಹೋಲಿಕೆ  

ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಆಗ ಮಹಾಯಾಜಕರೂ ಹಿರಿಯ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಬಂದು ನಿಂತರೂ ಏನೂ ಸಿಕ್ಕಲಿಲ್ಲ.


ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ; ಚಾಡಿಗಾರನು ಜ್ಞಾನಹೀನ.


ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?


ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ ಹೊಯ್ದಾಡುತ್ತಾ ನರಳುತ್ತೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.


ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.


ಪತಿಯು ಬಂದಾಗ ಆಕೆ ಅದೇ ಮಾತನ್ನು ಹೇಳಿ ಅವನಿಗೆ - ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಬಳಿಗೆ ಬಂದನು. ನಾನು ಕೂಗಿಕೊಂಡೆನು.


ಹೀಗಿರುವಲ್ಲಿ ಅವನ ದಣಿಯ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ ತನ್ನೊಡನೆ ಸಂಗಮಕ್ಕೆ ಕರೆದಳು.


ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಇಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೆ ಸಹ ಸಂತಾನವಾಯಿತು.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ಹೆಸರುಗೆಟ್ಟ ಪುರಿಯೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು.


ಅವನು ತನ್ನ ಬಟ್ಟೆಯನ್ನು ನನ್ನ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದನಲ್ಲಾ ಎಂದು ಆಕೆ ನೋಡಿ ಮನೆಯ ಸೇವಕರನ್ನು


ನಾನು ಕೂಗುವದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು