Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:5 - ಕನ್ನಡ ಸತ್ಯವೇದವು J.V. (BSI)

5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:5
9 ತಿಳಿವುಗಳ ಹೋಲಿಕೆ  

ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದ ಪಡಿಸಿದ್ದೀ.


ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು