Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:12 - ಕನ್ನಡ ಸತ್ಯವೇದವು J.V. (BSI)

12 ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:12
16 ತಿಳಿವುಗಳ ಹೋಲಿಕೆ  

ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವದು.


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವದು; ನಿಮ್ಮ ಭೂವಿುಯಲ್ಲಿ ಬೆಳೆಯಾಗುವದಿಲ್ಲ, ತೋಟಗಳ ಮರಗಳು ಫಲಿಸುವದಿಲ್ಲ.


ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.


ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು ತಿರುಕರಂತೆ ಅಲೆಯುತ್ತಾ ಭಿಕ್ಷೆಬೇಡಲಿ.


ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು.


ಕಾಯಿನನು ಯೆಹೋವನಿಗೆ - ನನ್ನ ಅಪರಾಧಫಲ ತಾಳಕೂಡದಷ್ಟಾಗಿದೆ.


ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -


ಹೊಲವು ಹಾಳಾಗಿದೆ, ದೇಶವು ದುಃಖಿಸುತ್ತದೆ, ಏಕಂದರೆ ಧಾನ್ಯವು ಸೂರೆಯಾಗಿದೆ, ದ್ರಾಕ್ಷಾರಸವು ತಗ್ಗಿದೆ, ಎಣ್ಣೆಯು ಕುಗ್ಗಿದೆ.


ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು