Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:8 - ಕನ್ನಡ ಸತ್ಯವೇದವು J.V. (BSI)

8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:8
23 ತಿಳಿವುಗಳ ಹೋಲಿಕೆ  

ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ಮಗನು ತಂದೆಯನ್ನು ತುಚ್ಫೀಕರಿಸುತ್ತಾನೆ, ಮಗಳು ತಾಯಿಗೆ ಎದುರೇಳುತ್ತಾಳೆ; ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ; ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗಿದ್ದಾರೆ.


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು; ಅಲ್ಲಿ ಬಿಡಿಸುವವರಾರೂ ಇರಲಿಲ್ಲವಾದದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾದಾಗ ಅವರಲ್ಲಿ ಸನ್ಬಲ್ಲಟ್ ಗೆಷೆಮರು ನನಗೆ - ಓನೋ ತಗ್ಗಿನ ಹಕ್ಕೆಫಿರೀವಿುನಲ್ಲಿ ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಕಳುಹಿಸಿದರು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.


ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು ಸ್ಥಿರಚಿತ್ತನೂ ನಿರ್ಭಯನೂ ಆಗಿರುವಿ.


ಅವನು ಯೇಸುವಿಗೆ ಮುದ್ದಿಡುವದಕ್ಕಾಗಿ ಆತನ ಬಳಿಗೆ ಬರಲು ಯೇಸು ಅವನಿಗೆ - ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡುಕೊಡುತ್ತೀಯಾ ಎಂದು ಕೇಳಿದನು.


ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ ಎಷ್ಟೋ ಒಳ್ಳೇದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.


ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು ಆಕೆ ಗಂಡುಮಗುವನ್ನು ಹೆತ್ತು - ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ನೇವಿುಸಿದನೆಂದು ಆ ಮಗುವಿಗೆ ಸೇತನೆಂಬ ಹೆಸರಿಟ್ಟಳು.


ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವದರಿಂದಾಗಲಿ ಸಮಯನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವದರಿಂದಾಗಲಿ


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡಕೊಂಡು ತನ್ನ ಆಳಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು