Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:8 - ಕನ್ನಡ ಸತ್ಯವೇದವು J.V. (BSI)

8 ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:8
17 ತಿಳಿವುಗಳ ಹೋಲಿಕೆ  

ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಸನ್ನಿಧಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು -


ರಾಜನು ಕೇಳುವ ಸಂಗತಿಯು ಅತಿಕಷ್ಟವಾದದು; ನರಜನ್ಮದವರ ಮಧ್ಯೆ ವಾಸಿಸದ ದೇವರುಗಳೇ ಹೊರತು ಇನ್ನಾರೂ ರಾಜನ ಸಮ್ಮುಖದಲ್ಲಿ ತಿಳಿಸಲಾರರು ಎಂದು ಉತ್ತರಕೊಟ್ಟರು.


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ - ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನೆದುರಾಗಿ ಕಂಡೆನು;


ಮನುಷ್ಯಕರ್ತವ್ಯವನ್ನು ತೋರಿಸತಕ್ಕ ಸಹಸ್ರದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವದರಿಂದ


ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ - ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು;


ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಯೋಸೇಫನು ಫರೋಹನಿಗೆ - ತಾವು ಕಂಡ ಎರಡು ಕನಸುಗಳೂ ಒಂದೇ ವಿಷಯವಾದವುಗಳು. ದೇವರು ತಾನು ಮಾಡಬೇಕೆಂದಿರುವದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು