Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:15 - ಕನ್ನಡ ಸತ್ಯವೇದವು J.V. (BSI)

15 ಆಗ ಫರೋಹನು ಯೋಸೇಫನಿಗೆ - ನಾನು ಒಂದು ಕನಸು ಕಂಡಿದ್ದೇನೆ; ಅದರ ಅರ್ಥವನ್ನು ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲವನೆಂದು ವರ್ತಮಾನ ಕೇಳಿದ್ದೇನೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಫರೋಹನು ಅವನಿಗೆ, “ನಾನು ಒಂದು ಕನಸುಕಂಡೆ, ಅದರ ಅರ್ಥ ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲೆ ಎಂಬ ಸಮಾಚಾರ ಕೇಳಿದ್ದೇನೆ,” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:15
11 ತಿಳಿವುಗಳ ಹೋಲಿಕೆ  

ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಹೌದು, ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ ಜ್ಞಾನವೂ ವಿವೇಕವೂ ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ ಒಗಟುಬಿಡಿಸುವ ಚಮತ್ಕಾರವೂ ಗುಂಜುಗಂಟುಬಿಚ್ಚುವ ಚಾತುರ್ಯವೂ ತೋರಿಬಂದದರಿಂದಲೇ ಹಾಗೆ ನೇವಿುಸಿದನು. ಈಗ ಈ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು ಎಂದಳು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.


ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.


ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು


ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.


ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು