Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:40 - ಕನ್ನಡ ಸತ್ಯವೇದವು J.V. (BSI)

40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನೀನೇ ಅರಮನೆಯಲ್ಲಿ ಮುಖ್ಯಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರು ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:40
16 ತಿಳಿವುಗಳ ಹೋಲಿಕೆ  

ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದದರಿಂದ ಅವನು ವಿುಕ್ಕ ಮುಖ್ಯಾಧಿಕಾರಿಗಳಿಗಿಂತಲೂ ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು; ಅವನನ್ನು ರಾಜನು ಪೂರ್ಣರಾಜ್ಯದ ಮೇಲೆ ನೇವಿುಸಲು ಉದ್ದೇಶಿಸಿದನು.


ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.


ಹೃದಯವು ಮರುಳುಗೊಂಡು ಕೈಯನ್ನು ಬಾಯಿ ಮುದ್ದಾಡಿದ್ದರೆ


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.


ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು