Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:42 - ಕನ್ನಡ ಸತ್ಯವೇದವು J.V. (BSI)

42 ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:42
27 ತಿಳಿವುಗಳ ಹೋಲಿಕೆ  

ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿ ಅವನಿಗೆ -


ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ತಾನು ಹಾಮಾನನಿಂದ ತೆಗಿಸಿದ್ದ ತನ್ನ ಮುದ್ರೆಯುಂಗರವನ್ನು ಅವನಿಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.


ನಿನ್ನ ಹಾಯಿಯು ನಿನಗೆ ಧ್ವಜವೂ ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟು ಎಲೀಷಕರಾವಳಿಯ ಧೂಮ್ರರಕ್ತವರ್ಣಗಳಿಂದ ಚಿತ್ರಿತವಾಗಿತ್ತು.


ನಿನ್ನ ಕೆನ್ನೆಗಳು ಜಡೆಗಳಿಂದಲೂ ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ!


ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.


ತನಗಾಗಿ ರತ್ನಗಂಬಳಿಗಳನ್ನು ಮಾಡುವಳು; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಕೂಡದಷ್ಟೆ. ಹೀಗಿರುವದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವದನ್ನು ಅರಸನ ಹೆಸರಿನಲ್ಲಿ ನೀವು ಬರೆಯಿಸಿ ರಾಜ ಮುದ್ರೆಯನ್ನು ಹಾಕಿರಿ ಎಂದು ಹೇಳಿದನು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.


ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ಅವು ನಿನ್ನ ತಲೆಗೆ ಅಂದದ ಪುಷ್ಪ ಕಿರೀಟ; ಕೊರಳಿಗೆ ಹಾರ.


ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.


ಅವನು - ಏನು ಒತ್ತೆ ಇಡಲಿ ಎಂದು ಕೇಳಲು ಆಕೆ - ನಿನ್ನ ಮುದ್ರೆ, ದಾರ, ಕೈಕೋಲು ಈ ಮೂರನ್ನು ಇಡು ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯ ಸಂಗಮ ಮಾಡಲು ಆಕೆ ಅವನಿಗೆ ಬಸುರಾದಳು.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.


ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನೂ ತನ್ನ ಯುದ್ಧವಸ್ತ್ರಗಳನ್ನೂ ಕತ್ತಿ ಬಿಲ್ಲು ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.


ಆದದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.


ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಙ್ತಿಯಲ್ಲಿ ಊಟಮಾಡುತ್ತಿದ್ದನು.


ಶಾಲು, ಚೀಲ, ಕೈಗನ್ನಡಿ, ನಾರುಮಡಿ, ಶಿರೋವೇಷ್ಟನ, ಮೇಲ್ಹೊದಿಕೆ, ಈ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು