Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:51 - ಕನ್ನಡ ಸತ್ಯವೇದವು J.V. (BSI)

51 ಚೊಚ್ಚಲುಮಗನು ಹುಟ್ಟಿದಾಗ ಯೋಸೇಫನು - ನಾನು ನನ್ನ ಎಲ್ಲಾ ಕಷ್ಟವನ್ನೂ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದ್ದಾನಲ್ಲಾ ಎಂದು ಹೇಳಿ ಅವನಿಗೆ ಮನಸ್ಸೆ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಜೇಷ್ಠಮಗ ಹುಟ್ಟಿದಾಗ ಜೋಸೆಫನು, “ನಾನು ನನ್ನ ಕಷ್ಟದುಃಖವನ್ನೂ ತಂದೆಯ ಮನೆಯವರನ್ನೂ ಮರೆಯುವಂತೆ ದೇವರು ಮಾಡಿದ್ದಾರಲ್ಲಾ!” ಎಂದುಕೊಂಡು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:51
19 ತಿಳಿವುಗಳ ಹೋಲಿಕೆ  

ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ಏಳು ಸುಭಿಕ್ಷ ವರುಷಗಳೂ ಅವುಗಳ ತರುವಾಯ ಏಳು ದುರ್ಭಿಕ್ಷವರುಷಗಳೂ ಬರುವವು. ಆಗ ಐಗುಪ್ತದೇಶದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿ ಹೋಗುವದು.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಎಲೌ ಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.


ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಬರಗಾಲ ಬರುವದಕ್ಕಿಂತ ಮುಂಚೆ ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತೆಂಬಾಕೆಯಲ್ಲಿ ಅವನಿಗೆ ಹುಟ್ಟಿದರು.


ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು.


ಕೆಲವು ಕಾಲವಾದ ಮೇಲೆ ತಂದೆಯು ಬಹಳ ಬಲಹೀನನಾಗಿ ಬಿದ್ದಿದ್ದಾನೆಂಬ ವರ್ತಮಾನವು ಯೋಸೇಫನಿಗೆ ಬರಲು ಅವನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ಸಂಗಡ ಕರೆದುಕೊಂಡು ಅವನ ಬಳಿಗೆ ಬಂದನು.


ಲೇವಿಯರಿಗೆ ಮಾತ್ರ ಕೊಡಲಿಲ್ಲ. ಯೋಸೇಫ್ಯರು ಮನಸ್ಸೆ, ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಅವರ ದನಕುರಿಗಳಿಗೋಸ್ಕರ ಅವುಗಳಿಗೆ ಸೇರಿದ ಹುಲ್ಲುಗಾವಲುಗಳೂ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಯೋಸೇಫನ ಚೊಚ್ಚಲಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ. ಮನಸ್ಸೆಯ ಹಿರೀಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾದದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತಗಳು ಸಿಕ್ಕಿದವು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.


ಯೋಸೇಫನ ಮಕ್ಕಳು ಮನಸ್ಸೆ ಎಫ್ರಾಯೀಮ್.


ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು