Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:18 - ಕನ್ನಡ ಸತ್ಯವೇದವು J.V. (BSI)

18 ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:18
12 ತಿಳಿವುಗಳ ಹೋಲಿಕೆ  

ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.


ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.


ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;


ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ; ವಿುಕ್ಕಾದವರು ನಿಮ್ಮ ಮನೆಯವರ ಅವಸರಕ್ಕೆ ಧಾನ್ಯವನ್ನು ತೆಗೆದುಕೊಂಡು ಹೋಗಿ ನಿಮ್ಮ ತಮ್ಮನನ್ನು


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು.


ಆದದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು