Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:19 - ಕನ್ನಡ ಸತ್ಯವೇದವು J.V. (BSI)

19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ; ವಿುಕ್ಕಾದವರು ನಿಮ್ಮ ಮನೆಯವರ ಅವಸರಕ್ಕೆ ಧಾನ್ಯವನ್ನು ತೆಗೆದುಕೊಂಡು ಹೋಗಿ ನಿಮ್ಮ ತಮ್ಮನನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಡುತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:19
13 ತಿಳಿವುಗಳ ಹೋಲಿಕೆ  

ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು.


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ತನ್ನ ತಂದೆಗೋಸ್ಕರ ಐಗುಪ್ತದೇಶದ ಒಳ್ಳೇ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಯ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನೂ ಬೇರೆ ತಿನ್ನುವ ಪದಾರ್ಥಗಳನ್ನೂ ಕಟ್ಟಿಸಿಕೊಟ್ಟನು.


ಇವರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟುಹೋದರು.


ಬರವು ಲೋಕದಲ್ಲೆಲ್ಲಾ ಹರಡಿಕೊಂಡಿರುವಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗಿಸಿ ಐಗುಪ್ತ್ಯರಿಗೆ ಧಾನ್ಯವನ್ನು ಮಾರಿಸಿದನು. ಐಗುಪ್ತದೇಶದಲ್ಲಿ ಬರವು ಬಹು ಘೋರವಾಗಿತ್ತು.


ಅವರನ್ನು ಮೈಗಾವಲಿನವರ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದನು.


ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ ಅಂದರು.


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ನನ್ನ ಬಳಿಗೆ ಕರೆದುಕೊಂಡು ಬರಬೇಕು; ಕರೆದುಕೊಂಡು ಬಂದರೆ, ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವದರಿಂದ ನೀವು ಸಾಯುವದಿಲ್ಲ ಅಂದನು. ಅವರು ಆ ಮಾತಿಗೆ ಒಪ್ಪಿದರು.


ಅದಕ್ಕೆ ದೇಶಾಧಿಪತಿ - ನೀವು ಸತ್ಯವಂತರೋ ಅಲ್ಲವೋ ಎಂಬದು ಗೊತ್ತಾಗುವದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು