Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:24 - ಕನ್ನಡ ಸತ್ಯವೇದವು J.V. (BSI)

24 ಯೋಸೇಫನಾದರೋ ಅವರ ಬಳಿಯಿಂದ ಒಂದು ಕಡೆಗೆ ಹೋಗಿ ಕಣ್ಣೀರು ಸುರಿಸಿದನು. ತರುವಾಯ ಅವರ ಬಳಿಗೆ ತಿರಿಗಿ ಬಂದು ಅವರ ಸಂಗಡ ಮಾತಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಾಗಿ ಅವನಿಗೆ ಬೇಡಿಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರ ಮಾತುಗಳಿಂದ ಅವನಿಗೆ ತುಂಬ ದುಃಖವಾಯಿತು. ಆದ್ದರಿಂದ ಯೋಸೇಫನು ಅವರ ಬಳಿಯಿಂದ ಸ್ವಲ್ಪದೂರ ಹೋಗಿ ಕಣ್ಣೀರು ಸುರಿಸಿ ಹಿಂತಿರುಗಿ ಬಂದನು. ಬಳಿಕ ಸಹೋದರರಲ್ಲಿ ಒಬ್ಬನಾದ ಸಿಮೆಯೋನನನ್ನು ಅವರ ಕಣ್ಣೆದುರಿನಲ್ಲೇ ಬಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:24
15 ತಿಳಿವುಗಳ ಹೋಲಿಕೆ  

ಯೋಸೇಫನಿಗೆ ತಮ್ಮನ ಮೇಲೆ ಕರುಳು ಮರುಗಿದ್ದರಿಂದ ಅವನು ಬೇಗನೆ ಎದ್ದು ಅಳುವದಕ್ಕೆ ಸ್ಥಳವನ್ನು ನೋಡಿಕೊಂಡು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಅದಕ್ಕೆ ಅವನು - ಸಮಾಧಾನವಾಗಿರ್ರಿ. ನೀವೇನೂ ಹೆದರಬೇಡಿರಿ; ನಿಮ್ಮ ತಂದೆಗೂ ನಿಮಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿಯೇ ನಿಕ್ಷೇಪ ಸಿಕ್ಕುವಂತೆ ಅನುಗ್ರಹಿಸಿದ್ದಾನೆ; ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದು


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.


ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳಲ್ಲಿ ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡುಕೊಂಡು ನಿರ್ಭಯವಾಗಿದ್ದ ಆ ಊರಿನವರ ಮೇಲೆ ಬಿದ್ದು


ಯೋಸೇಫನು ದ್ವಿಭಾಷಿಯ ಮುಖಾಂತರ ಅವರ ಸಂಗಡ ಮಾತಾಡಿದದರಿಂದ, ಅವರು ತಮ್ಮ ಮಾತು ಅವನಿಗೆ ಗೊತ್ತಾಗುವದೆಂದು ನೆನಸಲೇ ಇಲ್ಲ.


ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಲಾರದೆ - ನನ್ನ ಬಳಿಯಿಂದ ಎಲ್ಲರನ್ನೂ ಆಚೆಗೆ ಕಳುಹಿಸಿರಿ ಎಂದು ಬಾಯಿಬಿಟ್ಟು ಹೇಳಿದನು. ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಇತರರು ಯಾರೂ ಹತ್ತರ ಇರಲಿಲ್ಲ.


ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತ್ಯರಿಗೂ ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು