Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:36 - ಕನ್ನಡ ಸತ್ಯವೇದವು J.V. (BSI)

36 ಆಗ ಅವರ ತಂದೆಯಾದ ಯಾಕೋಬನು ಅವರಿಗೆ - ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ; ಬೆನ್ಯಾಮೀನನನ್ನೂ ಕರಕೊಂಡು ಹೋಗಬೇಕೆಂದಿದ್ದೀರಿ, ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂತು ಎಂದು ಹೇಳಲು ರೂಬೇನನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:36
21 ತಿಳಿವುಗಳ ಹೋಲಿಕೆ  

ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


[ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.


ಎಲೈ, ನನ್ನ ಜೀವವು ಗಾಳಿಯಂತಿದೆಯೆಂತಲೂ ನನ್ನ ಕಣ್ಣು ಇನ್ನೂ ಸುಖವನ್ನು ಕಾಣುವದಿಲ್ಲವೆಂತಲೂ ನೆನಪು ಮಾಡಿಕೋ.


ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.


ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ನಾನು ಈ ಹುಡುಗನನ್ನು ತಿರಿಗಿ ತಂದು ಒಪ್ಪಿಸದೆ ಹೋದರೆ ನನ್ನಿಬ್ಬರು ಗಂಡು ಮಕ್ಕಳನ್ನು ಕೊಂದು ಹಾಕಬಹುದು; ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರಕೊಂಡು ಬರುತ್ತೇನೆ ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.


ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು