Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:37 - ಕನ್ನಡ ಸತ್ಯವೇದವು J.V. (BSI)

37 ನಾನು ಈ ಹುಡುಗನನ್ನು ತಿರಿಗಿ ತಂದು ಒಪ್ಪಿಸದೆ ಹೋದರೆ ನನ್ನಿಬ್ಬರು ಗಂಡು ಮಕ್ಕಳನ್ನು ಕೊಂದು ಹಾಕಬಹುದು; ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರಕೊಂಡು ಬರುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ರೂಬೇನನು ತನ್ನ ತಂದೆಗೆ, “ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ನನ್ನ ಇಬ್ಬರು ಪುತ್ರರನ್ನು ಕೊಂದುಬಿಡು. ನೀನು ಬೆನ್ಯಾಮೀನನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರುಗಿ ತರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:37
6 ತಿಳಿವುಗಳ ಹೋಲಿಕೆ  

ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ರೂಬೇನನ ಮಕ್ಕಳಾದ ಹನೋಕ್ ಫಲ್ಲೂ ಹೆಚ್ರೋನ್ ಕರ್ಮೀ;


ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ.


ಆಗ ಅವರ ತಂದೆಯಾದ ಯಾಕೋಬನು ಅವರಿಗೆ - ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ; ಬೆನ್ಯಾಮೀನನನ್ನೂ ಕರಕೊಂಡು ಹೋಗಬೇಕೆಂದಿದ್ದೀರಿ, ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂತು ಎಂದು ಹೇಳಲು ರೂಬೇನನು ಅವನಿಗೆ -


ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು