Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:38 - ಕನ್ನಡ ಸತ್ಯವೇದವು J.V. (BSI)

38 ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:38
20 ತಿಳಿವುಗಳ ಹೋಲಿಕೆ  

ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ಆದರೆ ಯಾಕೋಬನು ಯೋಸೇಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಅವನಿಗೆ ಕೆಡುಕುಂಟಾದೀತೆಂದು ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.


ಅವನು ಅದರ ಗುರುತನ್ನು ಹಿಡಿದು - ಈ ಅಂಗಿ ನನ್ನ ಮಗನದೇ ಹೌದು; ದುಷ್ಟಮೃಗವು ಅವನನ್ನು ಕೊಂದು ತಿಂದಿರಬೇಕು; ಯೋಸೇಫನು ಸಂದೇಹವಿಲ್ಲದೆ ಸೀಳಿ ಹಾಕಲ್ಪಟ್ಟಿರಬೇಕು ಎಂದು ಹೇಳಿ


ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.


ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


[ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಲೋಕದಲ್ಲಿ ನಡೆಯುವ ಕೆಲಸಗಳನ್ನೆಲ್ಲಾ ನೋಡಿದ್ದೇನೆ; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ಅವನಿಗೇನು ಮಾಡಬೇಕೆಂಬದು ಬುದ್ಧಿವಂತನಾದ ನಿನಗೆ ಗೊತ್ತುಂಟಲ್ಲಾ; ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.


ತಂದೆಯಿದ್ದಾನೆ, ಅವನು ಮುದುಕನು; ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಹುಡುಗನೂ ಇದ್ದಾನೆ. ಅವನ ಒಡಹುಟ್ಟಿದವನು ಸತ್ತು ಹೋದನು; ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ, ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು ಎಂದು ಹೇಳಿದೆವು.


ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿನ ಮೇಲೆ ಗೋಣೀತಟ್ಟು ಸುತ್ತಿಕೊಂಡು ತನ್ನ ಮಗನಿಗಾಗಿ ಬಹುದಿನಗಳವರೆಗೂ ಹಂಬಲಿಸುತ್ತಿದ್ದನು.


ನಾನು ಈ ಹುಡುಗನನ್ನು ತಿರಿಗಿ ತಂದು ಒಪ್ಪಿಸದೆ ಹೋದರೆ ನನ್ನಿಬ್ಬರು ಗಂಡು ಮಕ್ಕಳನ್ನು ಕೊಂದು ಹಾಕಬಹುದು; ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರಕೊಂಡು ಬರುತ್ತೇನೆ ಎಂದು ಹೇಳಿದನು.


ನಿಮ್ಮ ತಮ್ಮನನ್ನೂ ಕರೆದುಕೊಂಡು ಹೊರಟು ತಿರಿಗಿ ಆ ಮನುಷ್ಯನ ಬಳಿಗೆ ಹೋಗಿರಿ.


ನಾವು ಸ್ವಾವಿುಯವರಿಗೆ - ಆ ಹುಡುಗನು ತನ್ನ ತಂದೆಯನ್ನು ಅಗಲುವದಕ್ಕಾಗುವದಿಲ್ಲ; ಅಗಲಿದರೆ ತಂದೆ ಸತ್ತಾನು ಅಂದೆವು.


ಸಾಗರಕ್ಕೆ ನರೆ ಬಂತೋ ಎಂದು ಊಹಿಸುವ ಹಾಗೆ ತಾನು ಬಂದ ದಾರಿಯನ್ನು ಶುಭ್ರಪಡಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು