Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:15 - ಕನ್ನಡ ಸತ್ಯವೇದವು J.V. (BSI)

15 ಆ ಮನುಷ್ಯರು ಆ ಕಾಣಿಕೆಯ ವಸ್ತುಗಳನ್ನು ಸಿದ್ಧಪಡಿಸಿ ಎರಡರಷ್ಟು ಹಣವನ್ನು ತೆಗೆದುಕೊಂಡು ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟು ಐಗುಪ್ತದೇಶಕ್ಕೆ ಸೇರಿ ಯೋಸೇಫನೆದುರಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ಆ ಕಾಣಿಕೆ ವಸ್ತುಗಳನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನು ತೆಗೆದುಕೊಂಡು ಹಾಗೂ ಬೆನ್ಯಾಮೀನನನ್ನು ಜೊತೆಯಲ್ಲಿ ಕರೆದುಕೊಂಡು ಹೊರಟರು. ಈಜಿಪ್ಟನ್ನು ಸೇರಿ, ಜೋಸೆಫನ ಸಮ್ಮುಖದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:15
6 ತಿಳಿವುಗಳ ಹೋಲಿಕೆ  

ಅವರು ತಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವನವನ ಹಣದ ಗಂಟು ಸಿಕ್ಕಿತು. ಅವರೂ ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಒಂದು ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ಅವನವನ ಚೀಲದಲ್ಲೇ ಇತ್ತು; ಅದನ್ನು ತಿರಿಗಿ ತಂದಿದ್ದೇವೆ.


ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು.


ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು; ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು