Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:29 - ಕನ್ನಡ ಸತ್ಯವೇದವು J.V. (BSI)

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ - ನೀವು ಹೇಳಿದ ನಿಮ್ಮ ಕಿರೀ ತಮ್ಮನು ಇವನೋ ಎಂದು ಕೇಳಿ ಅವನಿಗೆ - ಮಗನೇ, ದೇವರ ದಯೆ ನಿನ್ನ ಮೇಲಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:29
22 ತಿಳಿವುಗಳ ಹೋಲಿಕೆ  

ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;


ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.


ಸಹೋದರ ಸ್ನೇಹವು ನೆಲೆಯಾಗಿರಲಿ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.


ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ದಯೆಯೂ ಕನಿಕರವೂ ಉಳ್ಳವನು.


ದೇವರೇ, ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸು; ಪ್ರಸನ್ನ ಮುಖದಿಂದ ನಮ್ಮನ್ನು ನೋಡು. ಸೆಲಾ.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯೆಹೋವನು ತನ್ನನ್ನು ಆರಾಧಿಸುವದಕ್ಕೂ ಧೂಪಹಾಕುವದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡನಲ್ಲಾ ಎಂದು ಹೇಳಿದನು.


ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.


ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ; ಆತನು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ ಅಂದರು.


ಯೋಸೇಫ, ಬೆನ್ಯಾಮೀನ್ ಇವರಿಬ್ಬರು ರಾಹೇಲಳಲ್ಲಿ ಹುಟ್ಟಿದವರು.


ಅದಕ್ಕೆ ನೀನು ಸೇವಕರಾದ ನಮಗೆ - ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಅಪ್ಪಣೆಕೊಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು