Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:17 - ಕನ್ನಡ ಸತ್ಯವೇದವು J.V. (BSI)

17 ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:17
10 ತಿಳಿವುಗಳ ಹೋಲಿಕೆ  

ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


[ದೇವರು ನುಡಿದದ್ದು -] ಕ್ಲುಪ್ತಕಾಲವು ಬಂದಾಗ ನಾನೇ ನೀತಿಯಿಂದ ತೀರ್ಪುಕೊಡುವೆನು.


ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದೊಡನೆ ಕಳುಹಿಸಿದೆವಲ್ಲಾ; ಅದರಂತೆ ನೀನು ನಮಗೆ ಕೇಡನ್ನು ಮಾಡುವದಿಲ್ಲವೆಂಬದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಷ್ಟೆ ಎಂದು ಹೇಳಿದರು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ನಿಮಗೆ ತಿಳಿಯಲಿಲ್ಲವೋ ಎಂದು ಕೇಳಲು ಯೆಹೂದನು - ನಾವು ನಮ್ಮ ಸ್ವಾವಿುಗೆ ಏನು ಹೇಳೋಣ? ನಾವು ಹೇಗೆ ಮಾತಾಡೇವು? ನಾವು ನಿರ್ದೋಷಿಗಳಾಗಿ ತೋರುವಂತೆ ಏನು ಮಾಡಬೇಕು? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ಗುಲಾಮರಾದೆವಲ್ಲವೇ ಅನ್ನಲು ಯೋಸೇಫನು -


ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ಅದಕ್ಕೆ ಅವನು - ಒಳ್ಳೇದು, ನೀವು ಹೇಳಿದಂತೆ ಆಗಲಿ; ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ ಅವನು ನನಗೆ ದಾಸನಾಗಬೇಕು; ಉಳಿದವರು ತಪ್ಪಿಲ್ಲದವರು ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು