Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:9 - ಕನ್ನಡ ಸತ್ಯವೇದವು J.V. (BSI)

9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ ಅವನು ಮರಣದಂಡನೆಯನ್ನು ಹೊಂದಲಿ; ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ದಾಸರಾಗುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಪಾತ್ರೆ ನಿಮ್ಮ ಸೇವಕರಾದ ನಮ್ಮಲ್ಲಿ ಯಾರಾದರ ಬಳಿ ಸಿಕ್ಕಿದ್ದಾದರೆ ಅವನಿಗೆ ಮರಣದಂಡನೆ ಆಗಲಿ! ಅದುಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಊಳಿಗದವರಾಗುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:9
7 ತಿಳಿವುಗಳ ಹೋಲಿಕೆ  

ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ. ನಮ್ಮ ಬಂಧುಗಳ ಎದುರಾಗಿ ನನ್ನ ಸೊತ್ತನ್ನು ಪರೀಕ್ಷಿಸಬಹುದು; ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು


ನಿಮಗೆ ತಿಳಿಯಲಿಲ್ಲವೋ ಎಂದು ಕೇಳಲು ಯೆಹೂದನು - ನಾವು ನಮ್ಮ ಸ್ವಾವಿುಗೆ ಏನು ಹೇಳೋಣ? ನಾವು ಹೇಗೆ ಮಾತಾಡೇವು? ನಾವು ನಿರ್ದೋಷಿಗಳಾಗಿ ತೋರುವಂತೆ ಏನು ಮಾಡಬೇಕು? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ಗುಲಾಮರಾದೆವಲ್ಲವೇ ಅನ್ನಲು ಯೋಸೇಫನು -


ಮುಂಚೆ ನಾವು ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿವಿುತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ನಮ್ಮ ಮೇಲೆ ಫಕ್ಕನೆ ಬಿದ್ದು ನಮ್ಮನ್ನು ಕತ್ತೆಗಳ ಸಹಿತವಾಗಿ ಹಿಡಿಸಿ ಗುಲಾಮರನ್ನಾಗಿ ಮಾಡಿಕೊಳ್ಳಬೇಕೆಂದಿದ್ದಾನೆ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಂಡು


ಅದಕ್ಕೆ ಅವನು - ಒಳ್ಳೇದು, ನೀವು ಹೇಳಿದಂತೆ ಆಗಲಿ; ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ ಅವನು ನನಗೆ ದಾಸನಾಗಬೇಕು; ಉಳಿದವರು ತಪ್ಪಿಲ್ಲದವರು ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು