Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:21 - ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:21
12 ತಿಳಿವುಗಳ ಹೋಲಿಕೆ  

ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.


ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.


ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!


ಒರಟು ಮೋರೆಯು ಮಾರ್ಪಡುವದು. ದೇವರ ಮೇಲೆ ಇಟ್ಟ ಆಣೆಯ ನಿವಿುತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬದು ನನ್ನ ಬೋಧೆ.


ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿವಸವೇ ಸಿದ್ಧವಾಯಿತು.


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ಆತನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.


ತರುವಾಯ ಇಸ್ರಾಯೇಲ್ಯರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಪ್ರಕಾರ ಸೀನ್ ಎಂಬ ಅರಣ್ಯದಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀವಿುನಲ್ಲಿ ಇಳುಕೊಂಡರು.


ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರಕೊಂಡು ಬರುವದಕ್ಕೆ ಕಳುಹಿಸಿದ್ದ ರಥಗಳ ಮೇಲೆ ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.


ತರುವಾಯ ಯೋಸೇಫನು ಹೇಳಿಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿ ಇಸ್ರಾಯೇಲನೆನಿಸಿಕೊಳ್ಳುವ ಅವರ ತಂದೆ ಯಾಕೋಬನು ಚೇತರಿಸಿಕೊಂಡು -


ಐಗುಪ್ತದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮ ಪಾಲಿಗೆ ಬಂದದರಿಂದ ನಿಮಗಿರುವ ಸೊತ್ತಿನ ವಿಷಯ ಚಿಂತೆಪಡಬೇಕಾದ ಅವಶ್ಯವಿಲ್ಲ ಎಂಬದೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು