Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:23 - ಕನ್ನಡ ಸತ್ಯವೇದವು J.V. (BSI)

23 ತನ್ನ ತಂದೆಗೋಸ್ಕರ ಐಗುಪ್ತದೇಶದ ಒಳ್ಳೇ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಯ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನೂ ಬೇರೆ ತಿನ್ನುವ ಪದಾರ್ಥಗಳನ್ನೂ ಕಟ್ಟಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತನ್ನ ತಂದೆಗೆ ಈಜಿಪ್ಟ್ ದೇಶದ ಒಳ್ಳೊಳ್ಳೆಯ ವಸ್ತುಗಳನ್ನೂ ಹತ್ತು ಗಂಡು ಕತ್ತೆಗಳ ಮೇಲೆ ಹೇರಿಸಿದನು. ಅವನ ಪ್ರಯಾಣಕ್ಕೆ ಹತ್ತು ಹೆಣ್ಣು ಕತ್ತೆಗಳ ಮೇಲೆ ದವಸಧಾನ್ಯಗಳನ್ನೂ ಇತರ ಆಹಾರಪದಾರ್ಥಗಳನ್ನೂ ಕಳಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಸೇಫನು ತನ್ನ ತಂದೆಗೂ ಉಡುಗೊರೆಗಳನ್ನು ಕಳುಹಿಸಿದನು. ಅವನು ಈಜಿಪ್ಟಿನ ಶ್ರೇಷ್ಠವಾದ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಕಳುಹಿಸಿದನು. ತನ್ನ ತಂದೆಯ ಮರುಪ್ರಯಾಣಕ್ಕೆ ಬೇಕಾದ ಕಾಳು, ರೊಟ್ಟಿ ಮತ್ತು ಇತರ ಆಹಾರಪದಾರ್ಥಗಳನ್ನೂ ಹತ್ತು ಹೆಣ್ಣುಕತ್ತೆಗಳ ಮೇಲೆ ಹೊರಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಈಜಿಪ್ಟಿನ ಶ್ರೇಷ್ಠವಾದವುಗಳನ್ನೂ, ಪ್ರಯಾಣಕ್ಕೋಸ್ಕರ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿ, ರೊಟ್ಟಿ, ಆಹಾರಗಳನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:23
5 ತಿಳಿವುಗಳ ಹೋಲಿಕೆ  

ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ ದಣಿಯ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಗೆ ಬಂದು ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು; ಬೆನ್ಯಾಮೀನನಿಗೋ ಮುನ್ನೂರು ರೂಪಾಯಿಗಳನ್ನೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.


ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು