Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:15 - ಕನ್ನಡ ಸತ್ಯವೇದವು J.V. (BSI)

15 ಐಗುಪ್ತದೇಶದಲ್ಲಿಯೂ ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು - ನಮ್ಮ ಹಣವು ಮುಗಿದು ಹೋಯಿತು; ನೀನು [ಧರ್ಮವಾಗಿಯೇ] ಆಹಾರಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:15
11 ತಿಳಿವುಗಳ ಹೋಲಿಕೆ  

ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವದರಲ್ಲಿ ಕೊಡು ಎಂದು ಹೇಳಿರಿ ಅಂದು ಅವರನ್ನು ಕಳುಹಿಸಿದನು.


ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು ಅಂದನು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.


ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ಅದಕ್ಕೆ ಯೋಸೇಫನು - ನಿಮ್ಮ ದನಗಳನ್ನು ತನ್ನಿರಿ; ಹಣವಿಲ್ಲದಿದ್ದರೆ ದನಗಳನ್ನು ತೆಗೆದುಕೊಂಡು ಧಾನ್ಯವನ್ನು ಕೊಡಿಸುತ್ತೇನೆ ಅಂದನು.


ಆ ಆಹಾರಪದಾರ್ಥಗಳನ್ನು ಇಟ್ಟು ಕೂಡಿಸಿಕೊಳ್ಳುವದರಿಂದ ಐಗುಪ್ತದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರುಷಗಳಲ್ಲಿ ಜನರು ಕ್ಷಾಮದಿಂದ ಸಾಯುವದಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು