Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:22 - ಕನ್ನಡ ಸತ್ಯವೇದವು J.V. (BSI)

22 ವೈದಿಕರ ಭೂವಿುಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ವೈದಿಕರಿಗೆ ಫರೋಹನ ಕಡೆಯಿಂದ ಆಯವು ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಆಯದಿಂದ ಜೀವನ ಮಾಡುತ್ತಿದ್ದರು; ಆದದರಿಂದ ತಮ್ಮ ಭೂವಿುಯನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅರ್ಚಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಅವರಿಗೆ ಫರೋಹನಿಂದ ಭತ್ಯ ದೊರಕುತ್ತಿತ್ತು. ಆ ಭತ್ಯದಿಂದ ಜೀವನ ನಡೆಸುತ್ತಿದ್ದ ಆ ಅರ್ಚಕರು ತಮ್ಮ ಭೂಮಿಯನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:22
16 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ - ಕೆಲಸ ಮಾಡಲೊಲ್ಲದವನು ಊಟಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.


ದೇವರ ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶಮಾಡುವವನಿಗೆ ತನಗಿರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.


ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?


ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.


ಇದಲ್ಲದೆ ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡಿಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಭೂಸ್ವಾಸ್ತ್ಯಗಳಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.


ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಜ್ಞಾಪಕವಿರಲಿ.


ಬರಗಾಲ ಬರುವದಕ್ಕಿಂತ ಮುಂಚೆ ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತೆಂಬಾಕೆಯಲ್ಲಿ ಅವನಿಗೆ ಹುಟ್ಟಿದರು.


ಮತ್ತು ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟು ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ಹೊರಟನು.


ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ -


ಯೋಸೇಫನು ಐಗುಪ್ತದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.


ಯೋಸೇಫನು ಪ್ರಜೆಗಳಿಗೆ - ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂವಿುಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂವಿುಯಲ್ಲಿ ಬಿತ್ತಿರಿ.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು