Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:4 - ಕನ್ನಡ ಸತ್ಯವೇದವು J.V. (BSI)

4 ಅದಲ್ಲದೆ ಅವರು ಅವನಿಗೆ - ಕಾನಾನ್‍ದೇಶದಲ್ಲಿ ಬರವು ಘೋರವಾದ್ದರಿಂದ ನಿನ್ನ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ; ಆದದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್‍ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:4
11 ತಿಳಿವುಗಳ ಹೋಲಿಕೆ  

ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.


ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.


ಆ ದೇಶದಲ್ಲಿ ಬರವು ಬಹುಘೋರವಾಗಿತ್ತು.


ಆಗ ಐಗುಪ್ತ ಕಾನಾನ್‍ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ನಮ್ಮ ಪಿತೃಗಳಿಗೆ ಕಾಳುಕಡ್ಡಿ ಸಿಕ್ಕಲಿಲ್ಲ.


ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.


ಇದಲ್ಲದೆ ದೇವರು ಹೇಳಿದ್ದೇನಂದರೆ - ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.


ಕರ್ತನಾದ ಯೆಹೋವನು ಹೀಗಂದುಕೊಳ್ಳುತ್ತಾನೆ - ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ [ಅಲ್ಲಿ ಸೆರೆಯಾದರು]; ಅಶ್ಶೂರ್ಯರು ಹಕ್ಕಿಲ್ಲದೆ ಅವರನ್ನು ಬಾಧೆಪಡಿಸಿದರು.


ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.


ಆಗ ಫರೋಹನು ಯೋಸೇಫನಿಗೆ - ನಿನ್ನ ತಂದೆಯೂ ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರಷ್ಟೆ; ಐಗುಪ್ತದೇಶವು ನಿನ್ನೆದುರಿನಲ್ಲಿ ಅದೆ,


ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು