Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:16 - ಕನ್ನಡ ಸತ್ಯವೇದವು J.V. (BSI)

16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:16
46 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವದಿಲ್ಲ.


ಯೋಸೇಫನು ಬಹುಫಲವನ್ನು ಬಿಡುವ ವೃಕ್ಷಕ್ಕೆ ಸಮಾನನಾಗಿದ್ದಾನೆ, ಒರತೆಯ ಬಳಿಯಲ್ಲಿ ಬೆಳೆದು ರೆಂಬೆಗಳನ್ನು ಗೋಡೆಯ ಆಚೆಗೆ ಚಾಚಿರುವ ಫಲವೃಕ್ಷದಂತಿದ್ದಾನೆ.


ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಅವನು ಯೋಸೇಫ್ಯರಾದ ಎಫ್ರಾಯೀಮ್ ಮನಸ್ಸೆ ಕುಲಗಳ ಜನರಿಗೆ - ನೀವು ಮಹಾಜನಾಂಗವೂ ಬಹುಬಲವುಳ್ಳವರೂ ಆಗಿರುವದು ನಿಜ; ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಲ್ಲಾ!


ಯಾಕೋಬನು ತಾನು ಸಾಯುತ್ತಿರುವಾಗ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು; ತನ್ನ ಕೋಲಿನ ಮೇಲೆ ಬಾಗಿಕೊಂಡು ದೇವರಿಗೆ ನಮಸ್ಕಾರಮಾಡಿದನು.


ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು


ಇವರನ್ನು ಲೋಕದೊಳಗಿಂದ ತೆಗೆದುಕೊಂಡು ಹೋಗಬೇಕೆಂದು ನಾನು ಕೇಳಿಕೊಳ್ಳುವದಿಲ್ಲ; ಕೆಡುಕನಿಂದ ತಪ್ಪಿಸಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವದು; ಇದನ್ನು ದೀನರು ಕೇಳಿ ಸಂತೋಷಿಸುವರು.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು.


ಯೆಹೋವನ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ -


ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರಿಗೆ -


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.


ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು