Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:24 - ಕನ್ನಡ ಸತ್ಯವೇದವು J.V. (BSI)

24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರವಿುಯ ಭುಜಬಲದಿಂದಲೂ ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನ ಕಡೆಯಿಂದಲೂ ಅವನ ಬಿಲ್ಲು ಸ್ಥಿರವಾಗಿ ನಿಂತಿತು, ಅವನ ಕೈಗಳು ಚುರುಕಾಗಿ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:24
53 ತಿಳಿವುಗಳ ಹೋಲಿಕೆ  

ಯಾಕೋಬ್ಯರ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.


ನನ್ನ ಮಾನವು ಹೊಸಹೊಸದಾಗುತ್ತಲೂ ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು ಎಂಬದೇ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.


ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ ಮನೇ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು?


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣುಗುಟ್ಟುವವರು ಉಪದೇಶವನ್ನು ಗಮನಿಸುವರು ಎಂದು ಹೇಳುತ್ತಾನೆ.


ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನಿನ್ನ ಸತ್ಯತೆಯನ್ನು ಮುಂದಣ ಸಂತಾನದವರೆಲ್ಲರಿಗೂ ನನ್ನ ಬಾಯಿ ತಿಳಿಯಮಾಡುವದು.


ಹಿಂಸಕರಿಂದ ಬಿಡಿಸಿದವನು ನೀನೇ; ನೀನೇ ಹಗೆಗಳಿಗೆ ಆಶಾಭಂಗಪಡಿಸಿದವನು.


ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಯೆಹೋವನು ನನಗೆ ಕುರುಬನು; ಕೊರತೆಪಡೆನು.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.


ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟದರಿಂದ ಅವನು ಜ್ಞಾನವರ ಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲ್ಯರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆದದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ; ನಾನು ನಿಮ್ಮನ್ನೂ ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.


ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ.


ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ


ಬಿಲ್ಲುಗಾರರು ಬಂದು ಅವನನ್ನು ಕೆಣಕಿ ಬಾಣ ಎಸೆದು ಕವಿದುಕೊಂಡರು.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು.


ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು


ಯೆಹೋವನೇ, ದಾವೀದನ ಹಿತಕ್ಕೋಸ್ಕರ ಅವನ ಶ್ರಮಗಳನ್ನು ನೆನಪುಮಾಡಿಕೋ.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬೈಲೂ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರಡಿಸುವಿರಿ ಎಂದು ಉತ್ತರಕೊಟ್ಟನು.


ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.


ಆಗ ಅವನಿಗೆ - ಬಿಲ್ಲನ್ನು ಹಿಡಿದುಕೋ ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು