Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:28 - ಕನ್ನಡ ಸತ್ಯವೇದವು J.V. (BSI)

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:28
16 ತಿಳಿವುಗಳ ಹೋಲಿಕೆ  

ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ.


ಆ ಪತ್ರಗಳಿಂದ ಅರಸನು - ಅಹಷ್ವೇರೋಷ್‍ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ


ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.


ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕೈಯೆತ್ತಿದದರಿಂದ ಅವನನ್ನು ಗಲ್ಲಿಗೆ ಹಾಕಿಸಿ ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ!


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು


ಆ ಜನಾಂಗದವರು ಪ್ರಾಯದ ಸಿಂಹದಂತೆ ಎದ್ದು ಮೃಗೇಂದ್ರನಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ರಕ್ತವನ್ನು ಕುಡಿದು ಮಾಂಸವನ್ನು ತಿಂದು ತೃಪ್ತಿಹೊಂದಿದ ಹೊರತು ಮಲಗುವದಿಲ್ಲವಷ್ಟೆ ಅಂದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ಹಿಡಿದುಕೊಂಡದ್ದನ್ನು ಬೆಳಿಗ್ಗೆ ಉಣ್ಣುವನು. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು