Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:10 - ಕನ್ನಡ ಸತ್ಯವೇದವು J.V. (BSI)

10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:10
16 ತಿಳಿವುಗಳ ಹೋಲಿಕೆ  

ಭಕ್ತರಾದ ಜನರು ಸ್ತೆಫನನನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತು ಅವನ ಸಂಗಡ ಒಬ್ಬರೂ ಮಾತಾಡದೆಯೇ ಇದ್ದರು.


ದಾವೀದನು ಸೌಲಯೋನಾತಾನರ ಮೇಲೆ ಬಿಲ್ಲೆಂಬ ಒಂದು ಶೋಕಗೀತವನ್ನು ರಚಿಸಿ


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸವಾಗಿದ್ದರು.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರು ಮೋಶೆಗೋಸ್ಕರ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಯೊರ್ದನ್ ಹೊಳೆಯ ಆಚೆ, ಪಾರಾನಿಗೂ ತೋಫೆಲ್ ಲಾಬಾನ್ ಹಚೇರೋತ್ ದೀಜಾಹಾಬ್ ಎಂಬ ಸ್ಥಳಗಳಿಗೂ ನಡುವೆ, ಅರಣ್ಯದಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ ಮಾಡಿದ ಉಪನ್ಯಾಸಗಳು.


ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಆ ದೇಶದ ಜನರಾಗಿದ್ದ ಕಾನಾನ್ಯರು ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ - ಐಗುಪ್ತ್ಯರಿಗೆ ಬಂದಿರುವ ಈ ಶೋಕವು ಬಹುವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಆಬೇಲ್‍ಮಿಚ್ರಯೀಮ್ ಎಂದು ಹೆಸರಾಯಿತು. ಇದು ಯೊರ್ದನ್ ಹೊಳೆಯಿಂದ ಆಚೆಯಿದೆ.


ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು.


ನಾಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವದರಿಂದ ಅಷ್ಟು ದಿವಸ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತ್ಯರು ಅವನಿಗೋಸ್ಕರ ಎಪ್ಪತ್ತು ದಿನಗಳವರೆಗೂ ಗೋಳಾಡಿದರು.


ಇದಲ್ಲದೆ ಅವನ ಸಂಗಡ ರಥಗಳೂ ಕುದುರೆಗಳೂ ಸಹ ಹೋದವು. ಹೊರಟುಹೋದವರು ಬಹು ಮಂದಿ.


ಆರೋನನು ಸತ್ತುಹೋದದ್ದನ್ನು ಇಸ್ರಾಯೇಲ್ ಜನಾಂಗದವರೆಲ್ಲರೂ ತಿಳಿದು ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.


ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.


ಅವರಲ್ಲಿದ್ದ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು ಅವರ ಎಲುಬುಗಳನ್ನು ಅಲ್ಲಿದ್ದ ಏಲಾವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು