Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:15 - ಕನ್ನಡ ಸತ್ಯವೇದವು J.V. (BSI)

15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು - ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ಪೂರಾ ಶಿಕ್ಷೆಯನ್ನು ಕೊಟ್ಟಾನು ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ಯೋಸೇಫನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:15
13 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ಫಕ್ಕನೆ ಅವರು ಭಯಭ್ರಾಂತರಾಗುವರು; ಯಾಕಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ಹೇಗಂದರೆ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದದೆ ಎಂಬದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಯೋಚನೆಗಳು ವಾದಿಪ್ರತಿವಾದಿಗಳಂತೆ - ಇದು ತಪ್ಪೆಂದು ತಪ್ಪಲ್ಲವೆಂದು ಸೂಚಿಸುತ್ತವೆ.


ಅವರೆಲ್ಲರನ್ನೂ ಮೂರು ದಿನಗಳವರೆಗೂ ಕಾವಲಲ್ಲಿರಿಸಿದನು.


(ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.


ತಂದೆಗೆ ಸಮಾಧಿಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.


ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ ನಮಗೆ ಅಪ್ಪಣೆಮಾಡಿದ್ದೇನಂದರೆ, ನೀವು ಯೋಸೇಫನಿಗೆ -


ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವದಕ್ಕೆ ಒಳಸಂಚುಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು