Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು. ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:17
24 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವದಿಲ್ಲ.


ಇದು ನಿನ್ನ ತಂದೆಯ ದೇವರಿಂದಾಯಿತು, ಆತನು ನಿನಗೆ ಸಹಾಯ ಮಾಡಲಿ; ಸರ್ವಶಕ್ತನಾದ ದೇವರಿಂದಾಯಿತು,ಅತನು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಣ ಆಕಾಶದಿಂದಲೂ ಕೆಳಗಣ ಸಾಗರದ ಸೆಲೆಗಳಿಂದಲೂ ಸ್ತನ್ಯದಿಂದಲೂ ಗರ್ಭದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ; ಆತನು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರಿಗೆ ಅಂದರೆ ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ ಕರುಣೆಯೂ ಆಗಲಿ.


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸಹೋದರನಿಗೆ ಮನಃಪೂರ್ವಕವಾಗಿ ಕ್ಷವಿುಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.


ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ ನಮಗೆ ಅಪ್ಪಣೆಮಾಡಿದ್ದೇನಂದರೆ, ನೀವು ಯೋಸೇಫನಿಗೆ -


ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು - ಇಗೋ, ನಾವು ನಿನಗೆ ಗುಲಾಮರು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು