Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:11 - ಕನ್ನಡ ಸತ್ಯವೇದವು J.V. (BSI)

11 ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-12 ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:11
22 ತಿಳಿವುಗಳ ಹೋಲಿಕೆ  

ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ನೀನು ಬಹು ಜನಾಂಗಗಳನ್ನು ಕೊಳ್ಳೆಹೊಡೆದು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಜನಾಂಗಗಳಲ್ಲಿ ಉಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ನಿನ್ನ ವಿುತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಹೊಲಸನ್ನಾಗಿ ತಳ್ಳಿಬಿಟ್ಟೆನು; ಹೌದು. ನೆರಳುಕೊಡುವ ಕೆರೂಬಿಯೇ, ಕೆಂಡದ ಮಳೆಯ ಮಧ್ಯದಲ್ಲಿನ ನಿನ್ನ ನೆಲೆಯಿಂದ ನಾನು ನಿನ್ನನ್ನು ಕಿತ್ತು ಧ್ವಂಸಮಾಡಿದೆನು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.


ಯೆಹೋವನೇ, ನಾನು ಮೊರೆಯಿಡುತ್ತಿದ್ದರೂ ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೆ ಇರುವಿ.


ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ಚಾಡಿಗಾರನು ದೇಶದಲ್ಲಿ ಉಳಿಯನು; ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವದು.


ಕರ್ತನೇ, ಅವರ ಭಾಷೆಯನ್ನು ತಾರು ಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹಬಲಾತ್ಕಾರಗಳು ಕಾಣಬರುತ್ತವೆ.


ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.


ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.


ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ.


ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ಹೀಗಿರಲಾಗಿ ಯೆಹೋವನು ಮೋಶೆಗೆ - ನೀನು ಬೆಟ್ಟದಿಂದ ಇಳಿದುಹೋಗು; ಐಗುಪ್ತದೇಶದಿಂದ ನೀನು ಕರಕೊಂಡು ಬಂದ ನಿನ್ನ ಜನರು ಕೆಟ್ಟು ಹೋದರು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.


ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು