Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:7 - ಕನ್ನಡ ಸತ್ಯವೇದವು J.V. (BSI)

7 ಮತ್ತು ಯೆಹೋವನು - ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂವಿುಯ ಮೇಲಿನಿಂದ ಅಳಿಸಿಬಿಡುವೆನು; ಅದನ್ನು ಉಂಟುಮಾಡಿದ್ದಕ್ಕೆ ನನ್ನಲ್ಲಿ ಪಶ್ಚಾತ್ತಾಪ ಹುಟ್ಟಿತು; ಮನುಷ್ಯರೊಂದಿಗೆ ಸಕಲಮೃಗ ಕ್ರಿವಿುಪಕ್ಷಿಗಳನ್ನೂ ಅಳಿಸಿ ಬಿಡುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:7
21 ತಿಳಿವುಗಳ ಹೋಲಿಕೆ  

ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.


ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.


ಪಶುಪಕ್ಷಿ ಮೃಗಕ್ರಿವಿುಗಳು ಮನುಷ್ಯರು ಸಹಿತವಾಗಿ ಭೂವಿುಯ ಮೇಲೆ ಸಂಚರಿಸುವ ಸಕಲ ಪ್ರಾಣಿಗಳೂ ಲಯವಾದವು.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.


ಕರ್ತನಾದ ಯೆಹೋವನು ಮನಮರುಗಿ ಈ ದರ್ಶನವೂ ನೆರವೇರದು ಅಂದನು.


ಯೆಹೋವನು ಇಂತೆನ್ನುತ್ತಾನೆ - ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು