Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:13 - ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳೂ ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದೇ ದಿನ ನೋಹನೂ ಅವನ ಹೆಂಡತಿಯೂ ಮತ್ತು ಶೇಮ್, ಹಾಮ್, ಯೆಫೆತ್ ಎಂಬ ಅವನ ಮಕ್ಕಳೂ ಅವರ ಮಡದಿಯರೂ ನಾವೆಯನ್ನು ಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದೇ ದಿನದಲ್ಲಿ ನೋಹನು ಮತ್ತು ಅವನ ಪುತ್ರರಾದ ಶೇಮ್, ಹಾಮ್, ಯೆಫೆತ್ ಇವರೂ ನೋಹನ ಹೆಂಡತಿಯೂ ಅವನ ಪುತ್ರರ ಹೆಂಡತಿಯರೂ ನಾವೆಯನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:13
16 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಆದರೆ ನಿನ್ನ ಕೂಡ ನನ್ನ ನಿಬಂಧನೆಯನ್ನು ಮಾಡುತ್ತೇನೆ. ನೀನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.


ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಇಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೆ ಸಹ ಸಂತಾನವಾಯಿತು.


ಹಾಮನ ಸಂತಾನದವರು ಯಾರಂದರೆ - ಕೂಷ್, ವಿುಚ್ರಯಿಮ್, ಪೂತ್, ಕಾನಾನ್ ಎಂಬವರೇ.


ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ನೋಹನು ಐನೂರು ವರುಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ವಿಧವಾದ ಮೃಗ ಪಶು ಕ್ರಿವಿುಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ


ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂವಿುಯು ಒಣಗಿತ್ತು.


ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು