Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:11 - ಕನ್ನಡ ಸತ್ಯವೇದವು J.V. (BSI)

11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರಿಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂವಿುಯ ಮೇಲಿಂದ ಹರಿದು ಇಳಿದು ಹೋಯಿತು ಎಂದು ತಿಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:11
5 ತಿಳಿವುಗಳ ಹೋಲಿಕೆ  

ಈ ನಿಯಮದ ಪ್ರಕಾರ ಆ ಪರ್ಣಶಾಲೆಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ, ಕಾಡು ಒಲೀವ, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರುವ ಹಾಗೆ ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇವಿುನಲ್ಲಿಯೂ ಡಂಗುರದಿಂದ ಪ್ರಕಟಿಸಬೇಕು ಎಂಬದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ಅವನು ಇನ್ನೂ ಏಳು ದಿವಸ ತಡೆದು ಪಾರಿವಾಳವನ್ನು ತಿರಿಗಿ ಹೊರಕ್ಕೆ ಬಿಟ್ಟನು.


ಮತ್ತೇಳು ದಿವಸದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ತಿರಿಗಿ ಬರಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು