Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:23 - ಕನ್ನಡ ಸತ್ಯವೇದವು J.V. (BSI)

23 ಇವರಿಬ್ಬರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂದ್ಹಿಂದಕ್ಕೆ ನಡೆದು ತಂದೆಗೆ ಹೊದಿಸಿ ಅವನ ಮಾನವನ್ನು ಕಾಪಾಡಿದರು; ಅವರು ಹಿಮ್ಮುಖರಾಗಿದ್ದದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರಿಬ್ಬರು ಬಂದು ಹೊದಿಕೆಯನ್ನು ತೆಗೆದುಕೊಂಡು, ಬೆನ್ನಿನ ಹಿಂದೆ ಹಾಕಿಕೊಂಡು, ಹಿಂದುಹಿಂದಕ್ಕೆ ನಡೆದುಬಂದು ತಂದೆಗೆ ಅದನ್ನು ಹೊದಿಸಿ ಅವನ ಮಾನವನ್ನು ಕಾಪಾಡಿದರು. ಅವರಿಬ್ಬರು ಹಿಮ್ಮುಖರಾಗಿ ಇದ್ದುದರಿಂದ ತಂದೆ ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತೆಗೆದುಕೊಂಡು, ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು, ಹಿಂಭಾಗವಾಗಿ ಹೋಗಿ, ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಮ್ಮುಖವಾಗಿದ್ದುದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:23
11 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.


ತಲೆನರೆತ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವದನ್ನು ಕಂಡು ಹೊರಗಿದ್ದ ಅಣ್ಣತಮ್ಮಂದಿರಾದ ಶೇಮ್ ಯೆಫೆತರಿಗೆ ತಿಳಿಸಿದನು.


ನೋಹನು ಅಮಲಿಳಿದೆದ್ದು ಕಿರೀಮಗನು ಮಾಡಿದ್ದನ್ನು ತಿಳಿದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು