Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:5 - ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:5
26 ತಿಳಿವುಗಳ ಹೋಲಿಕೆ  

ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.


ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.


ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿತೀರಿಸುವದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇ ಬಿಡುವೆನು ಎಂದು ಹೇಳಿ


ಇವನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗುಂಟಾದ ಕೃಪೆಯನ್ನು ನೆನಪುಮಾಡಿಕೊಳ್ಳದೆ ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ - ಯೆಹೋವನೇ ನೋಡಿ ವಿಚಾರಿಸಲಿ ಅಂದನು.


ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು; ಅಂಥವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯಮಾಡಿದವನೇ; ಅವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ ಅವನು ನರಹತ್ಯಮಾಡಿದವನೇ; ಅವನಿಗೆ ಮರಣಶಿಕ್ಷೆಯಾಗಬೇಕು.


ದ್ವೇಷದಿಂದ ಕೈಯಾರೆ ಹೊಡೆಯುವದರಿಂದಾಗಲಿ ಕೊಂದರೆ ಅವನು ನರಹತ್ಯ ಮಾಡಿದವನೇ; ಅವನಿಗೆ ಮರಣ ಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.


ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋದರೆ


ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.


ಅವನಿಗೇನು ಮಾಡಬೇಕೆಂಬದು ಬುದ್ಧಿವಂತನಾದ ನಿನಗೆ ಗೊತ್ತುಂಟಲ್ಲಾ; ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಅವನ ಸೇವಕರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.


ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರೋಧವಾಗಿ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು